ಬ್ರೇಕಿಂಗ್ ನ್ಯೂಸ್
12-08-26 02:58 pm HK News Staffer ಕರ್ನಾಟಕ
ಬೆಂಗಳೂರು, ಆ.12: ಹಲವು ಸುತ್ತಿನ ಸಭೆ, ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆ ಬಳಿಕ ಡಿಕೆ ಶಿವಕುಮಾರ್ ಸಂಪುಟದಲ್ಲಿ ಇತ್ತೀಚೆಗೆ ಪ್ರಮಾಣ ಸ್ವೀಕರಿಸಿದ 13 ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆಗಳ ಪಟ್ಟಿಯನ್ನು ಸಿದ್ದಪಡಿಸಿರುವ ಸಿಎಂ ಡಿಕೆ ಶಿವಕುಮಾರ್ ಅಧಿಕೃತ ಮುದ್ರೆಗಾಗಿ ಪಟ್ಟಿಯನ್ನು ಲೋಕಭವನಕ್ಕೆ ಕಳುಹಿಸಿದ್ದಾರೆ.
ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಖಾತೆಯನ್ನು ಹೊಂದಿದ್ದ ಕೆ.ಎಚ್. ಮುನಿಯಪ್ಪ ಅವರಿಗೆ ಒತ್ತಾಸೆಯಂತೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಮುನಿಯಪ್ಪ ಅವರು ಸಮಾಜ ಕಲ್ಯಾಣ ಖಾತೆಯೇ ಬೇಕೇಂದು ಒಂದು ತಿಂಗಳಿನಿಂದಲೂ ಪಟ್ಟು ಹಿಡಿದಿದ್ದರು. ಅದರಂತೆ ಅದೇ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರ ಅಧಿಕೃತ ಮುದ್ರೆ ನಂತರ ಖಾತೆ ಹಂಚಿಕೆ ಘೋಷಣೆಯಾಗಲಿದೆ.
ಆದರೆ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ 19 ಮಂದಿ ಪೈಕಿ 13 ಮಂದಿಗೆ ಮಾತ್ರ ಈಗ ಖಾತೆ ಹಂಚಿಕೆ ಮಾಡಲಾಗಿದೆ. ಅಧಿವೇಶನ ಹಿನ್ನೆಲೆಯಲ್ಲಿ ಖಾತೆಗಳ ಹಂಚಿಕೆ ಮಾಡಲೇಬೇಕಾಗಿತ್ತು. ಆದರೆ ಅಬಕಾರಿ ಸೇರಿದಂತೆ ಇನ್ನೂ ಕೆಲವು ಪ್ರಮುಖ ಖಾತೆಗಳ ಹಂಚಿಕೆ ಆಗಿಲ್ಲ. ತೀವ್ರ ಆಕ್ಷೇಪಕ್ಕೆ ಗುರಿಯಾಗಿರುವ ನಾಗೇಂದ್ರ ಸೇರಿದಂತೆ 6 ಮಂದಿಗೆ ಖಾತೆ ಹಂಚಿಕೆ ಮಾಡಿಲ್ಲ.
ಸದ್ಯಕ್ಕೆ ಚಲುವರಾಯಸ್ವಾಮಿ – ಕೃಷಿ, ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು, ಮುನಿಯಪ್ಪ – ಸಮಾಜ ಕಲ್ಯಾಣ, ಸಂತೋಷ್ ಲಾಡ್ – ಕಾರ್ಮಿಕ, ಬಸಂತಪ್ಪ- ಮೀನುಗಾರಿಕೆ, ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತೆ, ರಾಯರೆಡ್ಡಿ- ಉನ್ನತ ಶಿಕ್ಷಣ, ಜಮೀರ್ ಖಾನ್ – ವಸತಿ ಖಾತೆ, ಲಕ್ಷ್ಮಣ ಸವದಿ – ಸಹಕಾರ ಇಲಾಖೆ, ಅಜಯ್ ಸಿಂಗ್ – ಅರಣ್ಯ ಇಲಾಖೆ, ಎಸ್. ಎಸ್ ಮಲ್ಲಿಕಾರ್ಜುನ – ಗಣಿ ಮತ್ತು ವಿಜ್ಞಾನ, ಮಾಗಡಿ ಬಾಲಕೃಷ್ಣ ಅವರಿಗೆ ಸಣ್ಣ ನೀರಾವರಿ ಇಲಾಖೆ ನೀಡಲಾಗಿದೆ.
ಬಾಲಕೃಷ್ಣ, ನಾಗೇಂದ್ರ ಬದಲಾವಣೆ ಆಗುತ್ತದೆ, ಬೇರೆಯವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ವದಂತಿ ಹಬ್ಬಿತ್ತು. ಆದರೆ ಬಾಲಕೃಷ್ಣ ಅವರಿಗೆ ಖಾತೆ ಹಂಚಿಕೆ ಆಗಿರುವುದರಿಂದ ಬದಲಾವಣೆ ಸುಳಿವು ಬಿಟ್ಟು ಕೊಟ್ಟಿಲ್ಲ.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm