ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ ಸಭಾಪತಿ ಹುದ್ದೆ ; ಎ‌.ಎಸ್ ಪೊನ್ನಣ್ಣ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಲ್ಲೇ ಮುಂದುವರಿಕೆ

13-08-26 01:00 pm       HK News Staffer   ಕರ್ನಾಟಕ

ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಮಂಕಾಳ ವೈದ್ಯ ಅವರನ್ನು ಈಗ ವಿಧಾಸಭೆಯ ಉಪ ಸಭಾಪತಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು, ಆ.13: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಮಂಕಾಳ ವೈದ್ಯ ಅವರನ್ನು ಈಗ ವಿಧಾಸಭೆಯ ಉಪ ಸಭಾಪತಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಿಎಂ ಕಾನೂನು ಸಲಹೆಗಾರರಾಗಿದ್ದ ಪೊನ್ನಣ್ಣ ಅವರು, ಡಿಕೆಶಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿಗೆ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ, ಅವರನ್ನು ಉಪ ಸಭಾಪತಿಯಾಗಿ ನೇಮಕ ಮಾಡುವಂತೆ ಹೈಕಮಾಂಡ್ ನಾಯಕರು ಕಳುಹಿಸಿದ ಪಟ್ಟಿಯಲ್ಲಿ ಶಿಫಾರಸು ಮಾಡಲಾಗಿತ್ತು. ಆದರೆ ಇದೀಗ ಅದರಿಂದ ಕೊಕ್ ನೀಡಿ, ಹಿಂದೆ ಇದ್ದಂತೆಯೇ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮುಂದುವರಿಕೆ ಮಾಡಲಾಗಿದೆ. 

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಎ.ಎಸ್.ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಇದೇ ವೇಳೆ, ಹಿರಿಯ ಶಾಸಕ, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆರ್.ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ. ದೇಶಪಾಂಡೆ ಅವರು ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಇದೇ ಹುದ್ದೆಯಲ್ಲಿದ್ದರು.