ಬ್ರೇಕಿಂಗ್ ನ್ಯೂಸ್
29-08-26 10:49 pm HK News Staffer ಕರ್ನಾಟಕ
ಬೆಂಗಳೂರು, ಆ.29: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಿಜೆಪಿ ಸಂಸದೀಯ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಇದೆ.
ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿಜೆಪಿಯ ಪರಮೋಚ್ಛ ನೀತಿರೂಪಕ ಸಂಸ್ಥೆಯಾದ ಸಂಸದೀಯ ಮಂಡಳಿಯಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದೀಗ ಬದಲಾದ ಸನ್ನಿವೇಶದಲ್ಲಿ ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ ಸರಣಿ ಬದಲಾವಣೆಗಳನ್ನು ತರುತ್ತಿದ್ದು, ಬಿಜೆಪಿ ಸಂಸದೀಯ ಮಂಡಳಿಯನ್ನು ಪರಿಷ್ಕರಣೆ ಮಾಡಲಿದ್ದಾರೆ. ಈ ವೇಳೆ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈಗಾಗಲೇ ಕರ್ನಾಟಕದ ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ಈಗ ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಮುಂದಾಗಿದ್ದು, ಬಿಎಸ್ವೈ ಸೇರಿದಂತೆ ಕೆಲ ಹಿರಿಯರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
12 ಸದಸ್ಯರ ಸಂಸದೀಯ ಮಂಡಳಿಯು ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಟಿಕೆಟ್ ಹಂಚಿಕೆ ಸೇರಿದಂತೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಈ ಎಲ್ಲಾ ಪ್ರಮುಖ ಪ್ರಕ್ರಿಯೆಗಳಲ್ಲಿ ಯಡಿಯೂರಪ್ಪ ಅವರು ರಾಜ್ಯವನ್ನು ಪ್ರತಿನಿಧಿಸುತ್ತ ಬಂದಿದ್ದರು.
ಆದ್ರೆ ‘ಬದಲಾದ ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಹೊಸ ಚಿಂತನೆಗಳಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ನಿರ್ಧರಿಸಿದೆ. ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಈಗಾಗಲೇ ಪರೋಕ್ಷ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಪಕ್ಷದ ಸಂಘಟನಾತ್ಮಕ ಸುಧಾರಣೆಯ ಭಾಗವಾಗಿ ನಡೆಯುತ್ತಿರುವ ಈ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm