ಬ್ರೇಕಿಂಗ್ ನ್ಯೂಸ್
31-08-26 08:29 pm HK News Staffer ಕರ್ನಾಟಕ
ಬೆಂಗಳೂರು , ಆ.31: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಆರಂಭಕ್ಕೂ ಮುನ್ನವೇ ಸಂಕಷ್ಟ ಎದುರಾಗಿದೆ. ಸೆಪ್ಟೆಂಬರ್ 6ರಂದು ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಜ್ಜಾಗಿರುವ ಬಿಗ್ ಬಾಸ್ ತಂಡಕ್ಕೆ ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 13ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಯಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪರಿಸರ ನಿಯಮಗಳ ಉಲ್ಲಂಘನೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
‘ನಿಯಮ ಪಾಲಿಸದಿದ್ದರೆ ಅನುಮತಿ ಇಲ್ಲ’
ಜಾಲಿವುಡ್ ಸ್ಟುಡಿಯೋ ಕಳೆದ ವರ್ಷ ವಿಧಿಸಲಾಗಿದ್ದ ದಂಡವನ್ನು ಇನ್ನೂ ಪಾವತಿಸಿಲ್ಲ. ಅಲ್ಲದೆ, ಪರಿಸರ ನಿಯಮಗಳಲ್ಲಿನ ಲೋಪಗಳನ್ನು ಸರಿಪಡಿಸಿಲ್ಲ ಹಾಗೂ ಎಸ್ಟಿಪಿ (STP) ಅಳವಡಿಕೆ ನಿಯಮಗಳನ್ನೂ ಪಾಲಿಸಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪರಿಸರ ನಿಯಮಗಳ ಉಲ್ಲಂಘನೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೆ.6ರ ಗ್ರ್ಯಾಂಡ್ ಪ್ರೀಮಿಯರ್ಗೆ ಸಂಕಷ್ಟ?
ನಿನ್ನೆಯಷ್ಟೇ ಕಲರ್ಸ್ ಕನ್ನಡದ ಬಿಗ್ ಬಾಸ್ ತಂಡ ಸುದ್ದಿಗೋಷ್ಠಿ ನಡೆಸಿ ಸೀಸನ್ 13ರ ಕುರಿತು ಮಾಹಿತಿ ಹಂಚಿಕೊಂಡಿತ್ತು. ಸೆಪ್ಟೆಂಬರ್ 6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಿದ್ಧತೆಗಳು ನಡೆಯುತ್ತಿರುವಾಗಲೇ ಪರಿಸರ ನಿಯಮಗಳ ವಿಚಾರ ಮುನ್ನೆಲೆಗೆ ಬಂದಿದೆ. ಹೀಗಾಗಿ ನಿಗದಿಯಂತೆ ಸೆಪ್ಟೆಂಬರ್ 6ರಂದು ಕಾರ್ಯಕ್ರಮ ಆರಂಭವಾಗಲಿದೆಯೇ ಎಂಬುದರ ಬಗ್ಗೆ ಇದೀಗ ಅನುಮಾನ ಮೂಡಿದೆ. ಕಾರ್ಯಕ್ರಮ ಆಯೋಜಕರು ಪರಿಸರ ಮಂಡಳಿಯ ನಿಯಮಗಳನ್ನು ಪಾಲಿಸಿ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.
ಕಳೆದ ವರ್ಷವೂ ಇದೇ ಸಮಸ್ಯೆ ;
ಕಳೆದ ವರ್ಷವೂ ಜಾಲಿವುಡ್ ಸ್ಟುಡಿಯೋಗೆ ಸಂಬಂಧಿಸಿದ ಪರಿಸರ ಉಲ್ಲಂಘನೆ ಹಾಗೂ ಕಾನೂನು ತೊಡಕುಗಳಿಂದಾಗಿ ಬಿಗ್ ಬಾಸ್ ಶೂಟಿಂಗ್ ಮತ್ತು ಪ್ರಸಾರಕ್ಕೆ ಸಮಸ್ಯೆ ಎದುರಾಗಿತ್ತು. ಈ ಬಾರಿ ಮತ್ತೆ ಅದೇ ರೀತಿಯ ಪರಿಸರ ನಿಯಮಗಳ ಉಲ್ಲಂಘನೆ ಆರೋಪ ಕೇಳಿಬಂದಿರುವುದರಿಂದ, ಬಿಗ್ ಬಾಸ್ ಸೀಸನ್ 13ರ ಗ್ರ್ಯಾಂಡ್ ಪ್ರೀಮಿಯರ್ಗೂ ಮುನ್ನ ಸ್ಟುಡಿಯೋ ಆಡಳಿತ ಮಂಡಳಿ ಲೋಪಗಳನ್ನು ಸರಿಪಡಿಸಿ ಅನುಮತಿ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಹೀಗಾಗಿ ಅದ್ಧೂರಿ ಆರಂಭಕ್ಕೆ ಸಜ್ಜಾಗಿದ್ದ ಬಿಗ್ ಬಾಸ್ ಸೀಸನ್ 13ಕ್ಕೆ ಇದೀಗ ಪರಿಸರ ನಿಯಮಗಳೇ ದೊಡ್ಡ ಸವಾಲಾಗಿ ಪರಿಣಮಿಸಿವೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 11:04 pm
HK News Staffer
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
ಮಧ್ಯರಾತ್ರಿ ಅಪಾರ್ಟ್ಮೆಂಟ್ ಲಿಫ್ಟ್ನಲ್ಲಿ ಸಿಲುಕಿದ...
31-08-26 04:19 pm
31-08-26 09:50 pm
HK News Staffer
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಡ್ರಾಪ್ ನೀ...
31-08-26 03:48 pm
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm