ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm