ಬ್ರೇಕಿಂಗ್ ನ್ಯೂಸ್
12-09-26 05:53 pm HK News Staffer ಕರ್ನಾಟಕ
ಕಾಸರಗೋಡು, ಸೆ.12: ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾಸರಗೋಡು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕೃಷಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಧನ್ಯಾ ಸುರೇಶ್ ಅವರು ಗಡಿ ಜಿಲ್ಲೆಯ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ವಯನಾಡಿನ 'ಕುರಿಚ್ಯ' ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಶ್ರೀಧನ್ಯಾ ದೇಶದ ಅತ್ಯುನ್ನತ ಸಿವಿಲ್ ಸರ್ವೀಸ್ (ಐಎಎಸ್) ಪರೀಕ್ಷೆ ತೇರ್ಗಡೆಯಾದ ಕೇರಳದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ತೀರಾ ಕನಿಷ್ಠ ಸೌಲಭ್ಯಗಳೂ ಇಲ್ಲದ, ದಿನಗೂಲಿ ನೌಕರರ ಕುಟುಂಬದಲ್ಲಿ ಜನಿಸಿದ ಶ್ರೀಧನ್ಯಾ, ಮಲಯಾಳ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದು ಆರ್ಥಿಕ ಮುಗ್ಗಟ್ಟಿನ ನಡುವೆಯೂ ಐಎಎಸ್ ಅಧಿಕಾರಿಯಾಗಬೇಕೆಂಬ ಕನಸನ್ನು ಕಠಿಣ ಪರಿಶ್ರಮದಿಂದ ನನಸಾಗಿಸಿಕೊಂಡವರು.
2018ರ ಯುಪಿಎಸ್ಸಿ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ 410ನೇ ರ್ಯಾಂಕ್ ಪಡೆಯುವ ಮೂಲಕ ದೇಶದ ಗಮನ ಸೆಳೆದಿದ್ದರು. ದೆಹಲಿಯಲ್ಲಿ ನಡೆದ ಸಂದರ್ಶನಕ್ಕೆ ಹೋಗಲು ಹಣವಿಲ್ಲದಿದ್ದಾಗ ಊರಿನ ಜನರೇ ಹಣ ಒಟ್ಟುಗೂಡಿಸಿ ನೆರವಾಗಿದ್ದರು. ಸಾಮಾನ್ಯ ಹಳ್ಳಿಯೊಂದರಿಂದ ತೊಡಗಿ ಕಠಿಣ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ಜಿಲ್ಲೆಯ ಅತ್ಯುನ್ನತ ಅಧಿಕಾರದ ಗದ್ದುಗೆ ತಲುಪಿರುವ ಇವರೀಗ ಕಾಸರಗೋಡಿನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm