ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm