ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm