ಬ್ರೇಕಿಂಗ್ ನ್ಯೂಸ್
12-01-21 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.12: ರಾಜ್ಯದಲ್ಲಿ ಜ. 16ರಿಂದ 16.90 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದ್ದು, ಇದಕ್ಕಾಗಿ 235 ಲಸಿಕಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಲಸಿಕೆ ವಿತರಣೆ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಕೊರೋನಾ ಯೋಧರಾದ ಆರೋಗ್ಯ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು. 28 ದಿನಗಳ ಬಳಿಕ ಅವರಿಗೆ ಎರಡನೇ ಡೋಸ್ ನೀಡಲಾಗುವುದು ಎಂದರು.

ಕಾರ್ಯಪಡೆ ರಚನೆ:
ರಾಜ್ಯಕ್ಕೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಮಾದರಿಯ ಲಸಿಕೆಗಳು ಬರಲಿವೆ.
ರಾಜ್ಯಮಟ್ಟದ ಎರಡು ಪ್ರಮುಖ ದಾಸ್ತಾನು ಮಳಿಗೆಗಳಿಂದ ಜಿಲ್ಲಾ ಮಟ್ಟಕ್ಕೆ ಪೂರೈಸಲು ಕೋಲ್ಡ್ ಚೈನ್ ವ್ಯವಸ್ಥೆ ಮಾಡಿದ್ದೇವೆ. ಇವುಗಳನ್ನು ಸಮರ್ಪಕವಾಗಿ ನಿಗಾವಹಿಸಿ ಅನುಷ್ಠಾನಕ್ಕೆ ತರಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸಿದ್ದೇವೆ ಎಂದು ಅವರು ವಿವರಿಸಿದರು.

45 ದಿನಗಳಲ್ಲಿ ರೋಗನಿರೋಧಕ ಶಕ್ತಿ- ಸುಧಾಕರ್:
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಲಸಿಕೆ ಪಡೆದ ವ್ಯಕ್ತಿಯಲ್ಲಿ 45 ದಿನಗಳಲ್ಲಿ ಕೊರೋನಾ ಸೋಂಕಿನ ವಿರುದ್ಧದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. 45 ದಿನಗಳವರೆಗೂ ಲಸಿಕೆ ಪಡೆದವರು ಸಹ ಎಚ್ಚರವಾಗಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಎಂದು ತಿಳಿಸಿದರು.

ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ:
ಮೊದಲ ಹಂತದ ಕೊರೋನಾ ಲಸಿಕಾ ಅಭಿಯಾನದಲ್ಲಿ ಕೊರೋನಾ ಯೋಧರಿಗೆ ಮೊದಲ ಆದ್ಯತೆ ನೀಡಲಾಗುವುದು. ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ ಲಸಿಕೆ ನೀಡಲು ಕೇಂದ್ರ ಕ್ರಮ ಕೈಗೊಳ್ಳಲಿದೆ. ಈ ವೇಳೆ 50 ವರ್ಷದೊಳಗಿನ ಅಥವಾ ಮೇಲ್ಪಟ್ಟದೀರ್ಘಕಾಲೀನ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಮೊದಲ ಆದ್ಯತೆಯಾಗಿ ಗುರುತಿಸಿ ಕೊರೋನಾ ಲಸಿಕೆ ನೀಡಲಾಗುವುದು. ಈ ಬಗ್ಗೆಯೂ ಪ್ರಧಾನಮಂತ್ರಿಗಳು ಸಲಹೆ ನೀಡಿದರು ಎಂದು ಹೇಳಿದರು. ಈ ಲಸಿಕೆಯು ಕ್ಲಿನಿಕಲ್ ಪರೀಕ್ಷೆಯಾಗಿದ್ದು, ಯಾವುದೇ ಅಪಾಯವಿಲ್ಲ. ಹೀಗಾಗಿ ಜನರು ಭಯ, ಆತಂಕವಿಲ್ಲದೆ ಸುರಕ್ಷಿತವಾಗಿ ಲಸಿಕೆ ಪಡೆಯಬಹುದು ಎಂದರು.
About 16 lakh frontline workers in Karnataka will be administered Covid-19 vaccine in the first phase starting from January 16, said Chief Minister B S Yediyurappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm