ಬ್ರೇಕಿಂಗ್ ನ್ಯೂಸ್
13-01-21 12:08 pm Bangalore Correspondent ಕರ್ನಾಟಕ
ಬೆಂಗಳೂರು, ಜ.13: ಸಿಎಂ ಯಡಿಯೂರಪ್ಪ ಹೊಸತಾಗಿ ಸಚಿವರಾಗುವ ಏಳು ಮಂದಿಯ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದೇ ವೇಳೆ, ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಒಬ್ಬರನ್ನು ಕೈಬಿಟ್ಟು ಏಳು ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಏಳು ಮಂದಿ ಸಂಪುಟಕ್ಕೆ ಸೇರುವ ಪಟ್ಟಿಯಲ್ಲಿ ಕಳೆದ ಬಾರಿ ಸರಕಾರ ಬರುವ ಸಂದರ್ಭದಲ್ಲಿ ಯಡಿಯೂರಪ್ಪ ಬಲಗೈನಂತಿದ್ದುಕೊಂಡು ಕೆಲಸ ಮಾಡಿದ್ದ ಸಿ.ಪಿ.ಯೋಗೀಶ್ವರ್, ಬೆಳಗಾವಿ ಮೂಲದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ, ಸುಳ್ಯದಲ್ಲಿ ಸತತ ಆರು ಬಾರಿ ಗೆದ್ದಿರುವ ಎಸ್.ಅಂಗಾರ ಹಾಗೂ ಕಾಂಗ್ರೆಸ್ನಿಂದ ಬಿಜೆಪಿ ಸೇರ್ಪಡೆಯಾಗಿದ್ದ ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಆದರೆ, ಬೆಂಗಳೂರಿನ ಆರ್.ಆರ್ ನಗರ ಕ್ಷೇತ್ರದ ಶಾಸಕ, ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಂದಿದ್ದ ಮುನಿರತ್ನ ಹೆಸರು ಕೊನೆಕ್ಷಣದಲ್ಲಿ ಪಟ್ಟಿಯಿಂದ ಹೊರಬಿದ್ದಿದೆ.



ನಿನ್ನೆ ವರೆಗೂ ಮುನಿರತ್ನ ಅವರಿಗೆ ಕ್ಯಾಬಿನೆಟ್ ಸೇರಲಿದ್ದಾರೆ ಎನ್ನಲಾಗಿತ್ತು. ಮುನಿರತ್ನರನ್ನು ಸೇರಿಸಿಕೊಳ್ಳಲು ಯಡಿಯೂರಪ್ಪ ಕೂಡ ಒಲವು ಹೊಂದಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಮುನಿರತ್ನ ಅವರನ್ನು ಸಚಿವರನ್ನಾಗಿಸಲು ಒಪ್ಪಿಗೆ ನೀಡಿಲ್ಲ ಎನ್ನಲಾಗುತ್ತಿದೆ. ಹೈಕಮಾಂಡ್ ಒಪ್ಪಿಗೆಯ ಮೇರೆಗೆ ಸಿಎಂ ಯಡಿಯೂರಪ್ಪ ಏಳು ಮಂದಿಯ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಸೇರಿ ಎಂಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ತಯಾರಿ ನಡೆಸಿದ್ದರು. ಅದಕ್ಕಾಗಿಯೇ ಒಬ್ಬರು ಸಚಿವರನ್ನು ಕೈಬಿಡಲು ತಯಾರಿ ನಡೆಸಿದ್ದರು. ಸಿಎಂ ಸೂಚನೆಯಂತೇ ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹಾಗಿದ್ದರೂ, ಮುನಿರತ್ನ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೇ ಸಂಪುಟ ವಿಸ್ತರಣೆಗೆ ಸಿಎಂ ಮತ್ತು ಬಿಜೆಪಿ ಹೈಕಮಾಂಡ್ ಕೈಹಾಕಿದೆ.
ವಿಶೇಷ ಅಂದ್ರೆ, ಈಗ ಸಂಪುಟ ಸೇರುತ್ತಿರುವವರಲ್ಲಿ ಎಲ್ಲರೂ ಯಡಿಯೂರಪ್ಪ ಪರ ಇರುವ ಬಣದವರೇ. ಅಂಗಾರ ಎಸ್ಸಿ ಕೋಟಾದಲ್ಲಿ ಸಂಪುಟ ಸೇರಿದರೆ, ಲಿಂಬಾವಳಿ, ನಿರಾಣಿ, ಉಮೇಶ ಕತ್ತಿ ಈ ಹಿಂದೆಯೂ ಯಡಿಯೂರಪ್ಪ ಜೊತೆಗೆ ಸಚಿವರಾಗಿ ಕೆಲಸ ಮಾಡಿದವರು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ, ಸುನಿಲ್ ಕುಮಾರ್ ಗೆ ಸ್ಥಾನ ಲಭಿಸಿಲ್ಲ. ಈ ಬಗ್ಗೆ ಸುನಿಲ್ ಕುಮಾರ್ ಅಸಮಾಧಾನದಿಂದ ಟ್ವೀಟ್ ಮಾಡಿದ್ದಾರೆ. ಪಕ್ಷ ನಿಷ್ಠೆ , ಹಿಂದುತ್ವ ನನ್ನ ಅಜೆಂಡಾ. ತಾನೇನು ಜಾತಿ ರಾಜಕಾರಣ ಮಾಡಿಲ್ಲ. ಜಾತಿ ನೆಲೆಯಲ್ಲಿ ಲಾಬಿಯನ್ನೂ ಮಾಡಿಲ್ಲ. ಪಕ್ಷದ ಶಿಸ್ತಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಸಚಿವ ಸ್ಥಾನದ ವಿಚಾರ ಪ್ರಸ್ತಾಪಿಸದೆ ಟ್ವೀಟ್ ಮಾಡಿದ್ದಾರೆ.
Karnataka Cabinet Expansion 2021 CM Yediyurappa Announce Names Of New Cabinet Ministers list.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm