ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm