ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm