ಬ್ರೇಕಿಂಗ್ ನ್ಯೂಸ್
22-01-21 06:15 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜ.22: ಹುಣಸೋಡಿನಲ್ಲಿ ನಡೆದ ಕ್ವಾರಿ ಬ್ಲಾಸ್ಟ್ ದುರಂತದ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಸ್ಫೋಟ ನಡೆದ ಹುಣಸೋಡಿನ ಅಬ್ಬಗೇರಿಯ ಘಟನಾ ಸ್ಥಳಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ, ಸ್ಥಳ ವೀಕ್ಷಿಸಿ ಗಾಬರಿ ವ್ಯಕ್ತಪಡಿಸಿದರು. ಸ್ಫೋಟ ಸಂಭವಿಸಿದ್ದ ಲಾರಿ ಗುರುತು ಸಿಗದಷ್ಟು ಅಪ್ಪಚ್ಚಿಯಾಗಿದ್ದನ್ನು ಕಂಡು ಸಚಿವರು ಮತ್ತು ಅಧಿಕಾರಿಗಳು ದಿಗ್ಭ್ರಮೆ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಣಿಗಾರಿಕೆಗೆ ಅನುಮತಿ ಪಡೆದುಕೊಂಡಿದ್ದಾರೆಯೇ ಅಥವಾ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ನಡೆಸುತ್ತಿದ್ದರೇ.. ಯಾರೆಲ್ಲಾ ಈ ಗಣಿಯ ಹಿಂದೆ ಇದ್ದಾರೆ, ಹೀಗೆ ಎಲ್ಲದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಮತ್ತು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂಥ ದುರ್ಘಟನೆ ನಡೆಯದಂತೆ ನೋಡಿಕೊಳ್ಳಲಾಗುವುದು. ಘಟನೆಗೆ ಡೈನಮೈಟ್ ಕಾರಣವೋ ಬೇರೆ ಇನ್ನೇನಾದ್ರೂ ಸ್ಫೋಟಕ ಕಾರಣವಾಗಿತ್ತೇ ಎನ್ನೋದ್ರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿಗಳು ಈಗಾಗ್ಲೇ ದುರಂತದಲ್ಲಿ ಮಡಿದವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಗಣಿ ಇಲಾಖೆಯ ವತಿಯಿಂದ ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.


15 ಕಾರ್ಮಿಕರ ಪೈಕಿ ಸಿಕ್ಕಿದ್ದು ಐದೇ ಶವ !
ಈವರೆಗೆ ಐದು ಮಂದಿ ಕಾರ್ಮಿಕರ ಶವಗಳು ಮಾತ್ರ ಸ್ಥಳದಲ್ಲಿ ದೊರೆತಿವೆ. ಆದರೆ, ಅ ಜಾಗದಲ್ಲಿ 15ಕ್ಕೂ ಹೆಚ್ಚು ರಾತ್ರಿ ವೇಳೆ ಇದ್ದರು ಎನ್ನಲಾಗುತ್ತಿದೆ. ಉಳಿದವರು ಎಲ್ಲಿ ಹೋಗಿದ್ದಾರೆ, ಪೂರ್ತಿ ನಾಶವಾಗಿದ್ದಾರೆಯೇ ಎನ್ನುವ ಬಗ್ಗೆ ಅಲ್ಲಿನ ಯಾರಲ್ಲೂ ಮಾಹಿತಿ ಇರಲಿಲ್ಲ. ಸತ್ತಿರುವ ಮಂದಿ ಬಿಹಾರದವರು ಮತ್ತು ಅಲ್ಲಿ ಕಾರ್ಮಿಕರಾಗಿದ್ದು ಬಿಹಾರ ಸೇರಿದಂತೆ ಉತ್ತರ ಭಾರತೀಯರೇ ಆಗಿರುವುದರಿಂದ ಎಷ್ಟು ಮಂದಿ ಇದ್ದರು. ಮತ್ತು ಅವರ ವಿಳಾಸ ಗಣಿ ಮಾಡುತ್ತಿದವರ ಬಳಿಯೂ ಇಲ್ಲ.
ಶಿವಮೊಗ್ಗದಲ್ಲಿ ಸ್ಫೋಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
Newly appointed mines and geology minister Murgesh Nirani has rushed to the blast site in Shivamogga.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm