ಬ್ರೇಕಿಂಗ್ ನ್ಯೂಸ್
31-07-20 11:56 am Headline Karnataka News Network ಕರ್ನಾಟಕ
ಹಾಸನ; ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕಿರಣ್ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು, ಮೇಲಾಧಿಕಾರಿ ಒತ್ತಡದಿಂದ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋದು ನನಗೆ ತಿಳಿದ ಮಾಹಿತಿ. ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಫೋನ್ ಕಿತ್ತುಕೊಂಡಿದ್ದಾರೆ. ಅವರ ಫೋನ್ ಕಾಲ್ ಮತ್ತು ಮೆಸೇಜ್ ಗಳನ್ನು ಡಿಲೀಟ್ ಮಾಡಬದುಹು ಎಂದು ಶಂಕೆ ಇದೆ. ಪಿಎಸ್ಐ ಕಿರಣ್ ಮೊಬೈಲ್ ಅನ್ನು ಐಜಿಪಿ ವಿಫುಲ್ ಕುಮಾರ್ ವಶಪಡಿಸಿಕೊಂಡಿದ್ದಾರೆ. ಅವರ ಮನೆಯವರ ಸಮ್ಮುಖದಲ್ಲಿ ಮೊಬೈಲ್ ಡಿಟೇಲ್ ಮಹಜರ್ ತೆಗೆಯಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಯವರ ಮುಂದೆ ತನಿಖೆ ನಡೆಸಬೇಕಿತ್ತು. ಹಾಗೆ ಮಾಡಿಲ್ಲ ಎಂದು ಆರೋಪಿ ಹಿರಿಯ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲೆಯಲ್ಲಿ ಪೊಲೀಸ್ ವರ್ಗಾವಣೆ ದಂಧೆ ಕೇವಲ ಒಬ್ಬ ಶಾಸಕ ಹಾಗೂ ಓರ್ವ ಸರ್ಕಲ್ ಇನ್ಸ್ ಪೆಕ್ಟರ್ ಕೈಯಲ್ಲಿದೆ. ಈ ಪ್ರಕರಣ ಸಿಬಿಐ ತನಿಖೆಯಾಗಬೇಕು. ಪ್ರಾಮಾಣಿಕ ಅಧಿಕಾರಿಗೆ ಬೆಲೆ ಎಲ್ಲಿದೆ. ಮೃತ ಕಿರಣ್ ಅವರ ಪತ್ನಿ ಬೆಳಿಗ್ಗೆ 11.15 ಕ್ಕೆ ಕಿರಣ್ ಗೆ ಫೋನ್ ಮಾಡಿ ಮಾತನಾಡಿದ್ದಾರೆ. ಮತ್ತೆ ಫೋನ್ ಮಾಡಿದಾಗ ಕಿರಣ್ ಫೋನ್ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಅನವಶ್ಯಕ ಮಾತುಗಳು ಬೇಡ; ಸಿಬ್ಬಂದಿಗೆ ಐಜಿಪಿ ಮನವಿ
ನಮ್ಮ ಇಲಾಖೆ ಈಗ ಬಹಳ ಸಮಸ್ಯೆಗಳ ಒಳಗೆ ಕೆಲಸ ಮಾಡುತ್ತಿದೆ. ಆ ಸಮಸ್ಯೆಗಳ ಒಳಗೆ ನಮ್ಮ ಸಿಬ್ಬಂದಿ ಸಾವಿನ ಬಗ್ಗೆ ಅನವಶ್ಯಕವಾಗಿ ಮಾತನಾಡಲು ಯಾರು ಹೋಗಬಾರದು. ಸಾವಿಗೆ ಕಾರಣ ಏನು ಎಂದು ತನಿಖೆ ಮಾಡಿ ಸತ್ಯಾಂಶ ಹೊರತರುತ್ತೇವೆ ಎಂದು ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಹೇಳಿದರು.
ಎರಡು ಕೊಲೆ ಪ್ರಕರಣಗಳಲ್ಲಿ ಒತ್ತಡ ಇತ್ತು ಎಂದು ಹೇಳುತ್ತಿದ್ದಾರೆ. ಸುಮ್ಮನೆ ಈ ರೀತಿ ವದಂತಿ ಮಾಡಲು ಜನ ಹೋಗಬಾರದು. ಪೊಲೀಸರೆಲ್ಲ ಒಂದು ಕುಟುಂಬದ ರೀತಿ ಇದ್ದೇವೆ. ನಮಗೆ ಆಗಿರುವ ನೋವು ಬೇರೆಯವರ ಜೊತೆ ಹಂಚಿಕೊಳ್ಳಲು ಆಗಲ್ಲ. ಜೀವಕ್ಕೆ ಗೌರವ ಕೊಡುವುದಾದರೆ ವದಂತಿ ಹಬ್ಬಿಸಬಾರದು. ಕೊಲೆಗೆ ಸಂಬಂಧಿಸಿದಂತೆ ಗೈಡ್ಲೈನ್ಸ್ ಕೊಡುವ ಕೆಲಸ ಮಾಡಿರುತ್ತೇವೆ. ಅದಕ್ಕೂ ಆತ್ಮಹತ್ಯೆಗೂ ಸಂಬಂಧವಿಲ್ಲ. ನಾವು ಅನವಶ್ಯಕವಾಗಿ ಮಾತನಾಡಬಾರದು. ನಮ್ಮ ಕುಟುಂಬದ ಜೀವ ಕಳೆದುಕೊಂಡು ನೋವಾಗಿದೆ. ಅವರ ಕುಟುಂಬದವರು, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರು ಬಹಳ ಒಳ್ಳೆಯ ಹಾಗೂ ದಕ್ಷ ಅಧಿಕಾರಿ. ಈ ವಿಷ್ಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಐಜಿಪಿ ಮನವಿ ಮಾಡಿದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm