ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm