ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm