ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.
ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 10:01 pm
Mangalore Correspondent
Mangalore Loksabha elections: ದಕ್ಷಿಣ ಕನ್ನಡ ಲೋ...
25-04-24 09:50 pm
Blood donation, KMC manipal: ಲೋಕಸಭಾ ಚುನಾವಣೆಯ...
25-04-24 08:45 pm
Banta Brigade, Mangalore, Brijesh Chowta: ಬಂಟ...
25-04-24 02:42 pm
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm