ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.

ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm