ಬ್ರೇಕಿಂಗ್ ನ್ಯೂಸ್
26-01-21 05:37 pm Headline Karnataka News Network ಕರ್ನಾಟಕ
ತುಮಕೂರು, ಜ.26: ಪದೇ ಪದೇ ಖಾತೆ ಬದಲಾವಣೆಯಿಂದ ಬೇಸತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಖಾತೆ ಬದಲಾವಣೆಯಿಂದ ಬೇಸರಗೊಂಡು ರಾಜಿನಾಮೆ ನೀಡಲು ಮುಂದಾಗಿದ್ದು ನಿಜ. ಇಂತಹ ಸ್ಥಿತಿ ನೋಡಿ ಮನಸ್ಸಿಗೆ ಬೇಸರವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತು. ಸಿಎಂ ಫೋನ್ ಮಾಡಿದ್ದಾಗ, ಹೀಗೆ ಪದೇ ಪದೇ ಖಾತೆ ಬದಲಾವಣೆ ಮಾಡಿ ಸಮಾಜಕ್ಕೆ ನನ್ನ ಬಗ್ಗೆ ಯಾವ ಸಂದೇಶ ಕೊಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದೆ. ಹೀಗಾಗಿ ಇಂದಿನ ಗಣರಾಜ್ಯೋತ್ಸವ ಭಾಷಣವನ್ನೇ ಕೊನೆಯ ಭಾಷಣವೆಂದು ಹೇಳಬೇಕೆಂದು ಯೋಚನೆ ಮಾಡಿದ್ದೆ ಎಂದು ಹೇಳಿದರು.
ನನಗೇನು ದೊಡ್ಡ ಖಾತೆ ಬೇಕೆಂದು ಕೇಳಿರಲಿಲ್ಲ. ನಾನು ಹಳ್ಳಿಯವನು. ಜನರ ಜೊತೆ ಬೆರೆತು ಕೆಲಸ ಮಾಡುವಂಥ ಖಾತೆಯನ್ನು ಕೊಡುವಂತೆ ಹೇಳಿದ್ದೆ. ಮುಖ್ಯಮಂತ್ರಿಯವರೇ ನನಗೆ ನೀರಾವರಿ ಖಾತೆ ಕೊಟ್ಟಿದ್ದರು. ಹಿಂದೆಲ್ಲಾ ಬೇರೆ ಪ್ರಮುಖ ಖಾತೆಗಳ ಜೊತೆ ನೀರಾವರಿ ಖಾತೆಯನ್ನು ಹೆಚ್ಚುವರಿಯಾಗಿ ಕೊಡುತ್ತಿದ್ದರು. ನನಗೆ ಖಾತೆ ಬಂದ ಬಳಿಕ ಒಂದಷ್ಟು ಕೆಲಸ ಮಾಡಿ ತೋರಿಸಿದ್ದೇನೆ. ಜೊತೆಗೆ ಕಾನೂನು ಮತ್ತು ಸಂಸದೀಯ ಖಾತೆಯಿಂದಲೂ ತೆರವು ಮಾಡಿದ್ದಾರೆ. ದಿಢೀರ್ ಆಗಿ ಹೀಗೆ ನಡೆದುಕೊಂಡಿದ್ದು ಬೇಸರ ಮೂಡಿಸಿತ್ತು. ಕೆಲವು ಪ್ರಮುಖರು ಮತ್ತು ಮಠಾಧೀಶರು ರಾಜಿನಾಮೆ ನೀಡದಂತೆ ಹೇಳಿದ್ದಾರೆ. ಮರಳಿ ಅದೇ ಖಾತೆ ನೀಡುವ ಬಗ್ಗೆ ಹೇಳಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.

ಮತ್ತೆ ನೀರಾವರಿ ಖಾತೆ ಕೊಟ್ಟ ಸಿಎಂ
ಸೋಮವಾರದ ಬೆಳವಣಿಗೆಯಲ್ಲಿ ಮಾಧುಸ್ವಾಮಿ ರಾಜಿನಾಮೆ ನೀಡುತ್ತಾರೆಂದು ವದಂತಿ ಹಬ್ಬುತ್ತಲೇ ರಾತ್ರಿ ವೇಳೆ ಫೋನ್ ಮಾಡಿದ್ದ ಸಿಎಂ ಯಡಿಯೂರಪ್ಪ, ತಮ್ಮ ಪರಮಾಪ್ತನನ್ನು ಮನವೊಲಿಸಿದ್ದಾರೆ. ಅಲ್ಲದೆ, ನೀರಾವರಿ ಖಾತೆಯನ್ನೇ ಮರಳಿ ನೀಡುವುದಾಗಿ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಪ್ರವಾಸೋದ್ಯಮ ಮತ್ತು ವಕ್ಫ್ ಖಾತೆ ನೀಡಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ ಮಾಧುಸ್ವಾಮಿ, ಸಿಎಂ ಫೋನ್ ಮಾಡಿದಾಗಲು ಸ್ವಾಭಿಮಾನಕ್ಕೆ ಪೆಟ್ಟಾಗಿದ್ದು ಸಚಿವನಾಗಿ ಮುಂದುವರಿಯಲ್ಲ. ಶಾಸಕನಾಗಿಯೇ ಇರುತ್ತೇನೆ ಎಂದು ಹೇಳಿ ಫೋನ್ ಇಟ್ಟಿದ್ದರು. ತಮ್ಮ ಆಪ್ತರ ಬಳಿಯೂ ಇದನ್ನೇ ಹೇಳುತ್ತಿದ್ದರು.
ಸಿಎಂ ಯಡಿಯೂರಪ್ಪ ವಿರುದ್ಧ ವಿಪಕ್ಷಗಳು ಮುಗಿಬೀಳುತ್ತಿದ್ದಾಗ ಗಟ್ಟಿಯಾಗಿ ಅಡ್ಡ ನಿಂತು ಸಮರ್ಥಿಸಿಕೊಳ್ಳುತ್ತಿದ್ದ ಮಾಧುಸ್ವಾಮಿ ಸಚಿವ ಸ್ಥಾನದಿಂದ ದೂರ ಸರಿಯುವುದು ಯಡಿಯೂರಪ್ಪರಿಗೆ ದೊಡ್ಡ ಪೆಟ್ಟು ಬಿದ್ದಂತಾಗಿತ್ತು. ಕೂಡಲೇ ಎಚ್ಚೆತ್ತ ಯಡಿಯೂರಪ್ಪ ಸಿ.ಪಿ.ಯೋಗೀಶ್ವರ್ ಗೆ ಕೊಟ್ಟಿದ್ದ ನೀರಾವರಿ ಖಾತೆಯನ್ನು ಮರಳಿ ಮಾಧುಸ್ವಾಮಿಗೆ ನೀಡಿ ಕೈತೊಳೆದುಕೊಂಡಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm