ಬ್ರೇಕಿಂಗ್ ನ್ಯೂಸ್
26-01-21 05:37 pm Headline Karnataka News Network ಕರ್ನಾಟಕ
ತುಮಕೂರು, ಜ.26: ಪದೇ ಪದೇ ಖಾತೆ ಬದಲಾವಣೆಯಿಂದ ಬೇಸತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಖಾತೆ ಬದಲಾವಣೆಯಿಂದ ಬೇಸರಗೊಂಡು ರಾಜಿನಾಮೆ ನೀಡಲು ಮುಂದಾಗಿದ್ದು ನಿಜ. ಇಂತಹ ಸ್ಥಿತಿ ನೋಡಿ ಮನಸ್ಸಿಗೆ ಬೇಸರವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತು. ಸಿಎಂ ಫೋನ್ ಮಾಡಿದ್ದಾಗ, ಹೀಗೆ ಪದೇ ಪದೇ ಖಾತೆ ಬದಲಾವಣೆ ಮಾಡಿ ಸಮಾಜಕ್ಕೆ ನನ್ನ ಬಗ್ಗೆ ಯಾವ ಸಂದೇಶ ಕೊಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದೆ. ಹೀಗಾಗಿ ಇಂದಿನ ಗಣರಾಜ್ಯೋತ್ಸವ ಭಾಷಣವನ್ನೇ ಕೊನೆಯ ಭಾಷಣವೆಂದು ಹೇಳಬೇಕೆಂದು ಯೋಚನೆ ಮಾಡಿದ್ದೆ ಎಂದು ಹೇಳಿದರು.
ನನಗೇನು ದೊಡ್ಡ ಖಾತೆ ಬೇಕೆಂದು ಕೇಳಿರಲಿಲ್ಲ. ನಾನು ಹಳ್ಳಿಯವನು. ಜನರ ಜೊತೆ ಬೆರೆತು ಕೆಲಸ ಮಾಡುವಂಥ ಖಾತೆಯನ್ನು ಕೊಡುವಂತೆ ಹೇಳಿದ್ದೆ. ಮುಖ್ಯಮಂತ್ರಿಯವರೇ ನನಗೆ ನೀರಾವರಿ ಖಾತೆ ಕೊಟ್ಟಿದ್ದರು. ಹಿಂದೆಲ್ಲಾ ಬೇರೆ ಪ್ರಮುಖ ಖಾತೆಗಳ ಜೊತೆ ನೀರಾವರಿ ಖಾತೆಯನ್ನು ಹೆಚ್ಚುವರಿಯಾಗಿ ಕೊಡುತ್ತಿದ್ದರು. ನನಗೆ ಖಾತೆ ಬಂದ ಬಳಿಕ ಒಂದಷ್ಟು ಕೆಲಸ ಮಾಡಿ ತೋರಿಸಿದ್ದೇನೆ. ಜೊತೆಗೆ ಕಾನೂನು ಮತ್ತು ಸಂಸದೀಯ ಖಾತೆಯಿಂದಲೂ ತೆರವು ಮಾಡಿದ್ದಾರೆ. ದಿಢೀರ್ ಆಗಿ ಹೀಗೆ ನಡೆದುಕೊಂಡಿದ್ದು ಬೇಸರ ಮೂಡಿಸಿತ್ತು. ಕೆಲವು ಪ್ರಮುಖರು ಮತ್ತು ಮಠಾಧೀಶರು ರಾಜಿನಾಮೆ ನೀಡದಂತೆ ಹೇಳಿದ್ದಾರೆ. ಮರಳಿ ಅದೇ ಖಾತೆ ನೀಡುವ ಬಗ್ಗೆ ಹೇಳಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.

ಮತ್ತೆ ನೀರಾವರಿ ಖಾತೆ ಕೊಟ್ಟ ಸಿಎಂ
ಸೋಮವಾರದ ಬೆಳವಣಿಗೆಯಲ್ಲಿ ಮಾಧುಸ್ವಾಮಿ ರಾಜಿನಾಮೆ ನೀಡುತ್ತಾರೆಂದು ವದಂತಿ ಹಬ್ಬುತ್ತಲೇ ರಾತ್ರಿ ವೇಳೆ ಫೋನ್ ಮಾಡಿದ್ದ ಸಿಎಂ ಯಡಿಯೂರಪ್ಪ, ತಮ್ಮ ಪರಮಾಪ್ತನನ್ನು ಮನವೊಲಿಸಿದ್ದಾರೆ. ಅಲ್ಲದೆ, ನೀರಾವರಿ ಖಾತೆಯನ್ನೇ ಮರಳಿ ನೀಡುವುದಾಗಿ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಪ್ರವಾಸೋದ್ಯಮ ಮತ್ತು ವಕ್ಫ್ ಖಾತೆ ನೀಡಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ ಮಾಧುಸ್ವಾಮಿ, ಸಿಎಂ ಫೋನ್ ಮಾಡಿದಾಗಲು ಸ್ವಾಭಿಮಾನಕ್ಕೆ ಪೆಟ್ಟಾಗಿದ್ದು ಸಚಿವನಾಗಿ ಮುಂದುವರಿಯಲ್ಲ. ಶಾಸಕನಾಗಿಯೇ ಇರುತ್ತೇನೆ ಎಂದು ಹೇಳಿ ಫೋನ್ ಇಟ್ಟಿದ್ದರು. ತಮ್ಮ ಆಪ್ತರ ಬಳಿಯೂ ಇದನ್ನೇ ಹೇಳುತ್ತಿದ್ದರು.
ಸಿಎಂ ಯಡಿಯೂರಪ್ಪ ವಿರುದ್ಧ ವಿಪಕ್ಷಗಳು ಮುಗಿಬೀಳುತ್ತಿದ್ದಾಗ ಗಟ್ಟಿಯಾಗಿ ಅಡ್ಡ ನಿಂತು ಸಮರ್ಥಿಸಿಕೊಳ್ಳುತ್ತಿದ್ದ ಮಾಧುಸ್ವಾಮಿ ಸಚಿವ ಸ್ಥಾನದಿಂದ ದೂರ ಸರಿಯುವುದು ಯಡಿಯೂರಪ್ಪರಿಗೆ ದೊಡ್ಡ ಪೆಟ್ಟು ಬಿದ್ದಂತಾಗಿತ್ತು. ಕೂಡಲೇ ಎಚ್ಚೆತ್ತ ಯಡಿಯೂರಪ್ಪ ಸಿ.ಪಿ.ಯೋಗೀಶ್ವರ್ ಗೆ ಕೊಟ್ಟಿದ್ದ ನೀರಾವರಿ ಖಾತೆಯನ್ನು ಮರಳಿ ಮಾಧುಸ್ವಾಮಿಗೆ ನೀಡಿ ಕೈತೊಳೆದುಕೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm