ಬ್ರೇಕಿಂಗ್ ನ್ಯೂಸ್
26-01-21 05:37 pm Headline Karnataka News Network ಕರ್ನಾಟಕ
ತುಮಕೂರು, ಜ.26: ಪದೇ ಪದೇ ಖಾತೆ ಬದಲಾವಣೆಯಿಂದ ಬೇಸತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಖಾತೆ ಬದಲಾವಣೆಯಿಂದ ಬೇಸರಗೊಂಡು ರಾಜಿನಾಮೆ ನೀಡಲು ಮುಂದಾಗಿದ್ದು ನಿಜ. ಇಂತಹ ಸ್ಥಿತಿ ನೋಡಿ ಮನಸ್ಸಿಗೆ ಬೇಸರವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತು. ಸಿಎಂ ಫೋನ್ ಮಾಡಿದ್ದಾಗ, ಹೀಗೆ ಪದೇ ಪದೇ ಖಾತೆ ಬದಲಾವಣೆ ಮಾಡಿ ಸಮಾಜಕ್ಕೆ ನನ್ನ ಬಗ್ಗೆ ಯಾವ ಸಂದೇಶ ಕೊಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದೆ. ಹೀಗಾಗಿ ಇಂದಿನ ಗಣರಾಜ್ಯೋತ್ಸವ ಭಾಷಣವನ್ನೇ ಕೊನೆಯ ಭಾಷಣವೆಂದು ಹೇಳಬೇಕೆಂದು ಯೋಚನೆ ಮಾಡಿದ್ದೆ ಎಂದು ಹೇಳಿದರು.
ನನಗೇನು ದೊಡ್ಡ ಖಾತೆ ಬೇಕೆಂದು ಕೇಳಿರಲಿಲ್ಲ. ನಾನು ಹಳ್ಳಿಯವನು. ಜನರ ಜೊತೆ ಬೆರೆತು ಕೆಲಸ ಮಾಡುವಂಥ ಖಾತೆಯನ್ನು ಕೊಡುವಂತೆ ಹೇಳಿದ್ದೆ. ಮುಖ್ಯಮಂತ್ರಿಯವರೇ ನನಗೆ ನೀರಾವರಿ ಖಾತೆ ಕೊಟ್ಟಿದ್ದರು. ಹಿಂದೆಲ್ಲಾ ಬೇರೆ ಪ್ರಮುಖ ಖಾತೆಗಳ ಜೊತೆ ನೀರಾವರಿ ಖಾತೆಯನ್ನು ಹೆಚ್ಚುವರಿಯಾಗಿ ಕೊಡುತ್ತಿದ್ದರು. ನನಗೆ ಖಾತೆ ಬಂದ ಬಳಿಕ ಒಂದಷ್ಟು ಕೆಲಸ ಮಾಡಿ ತೋರಿಸಿದ್ದೇನೆ. ಜೊತೆಗೆ ಕಾನೂನು ಮತ್ತು ಸಂಸದೀಯ ಖಾತೆಯಿಂದಲೂ ತೆರವು ಮಾಡಿದ್ದಾರೆ. ದಿಢೀರ್ ಆಗಿ ಹೀಗೆ ನಡೆದುಕೊಂಡಿದ್ದು ಬೇಸರ ಮೂಡಿಸಿತ್ತು. ಕೆಲವು ಪ್ರಮುಖರು ಮತ್ತು ಮಠಾಧೀಶರು ರಾಜಿನಾಮೆ ನೀಡದಂತೆ ಹೇಳಿದ್ದಾರೆ. ಮರಳಿ ಅದೇ ಖಾತೆ ನೀಡುವ ಬಗ್ಗೆ ಹೇಳಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.

ಮತ್ತೆ ನೀರಾವರಿ ಖಾತೆ ಕೊಟ್ಟ ಸಿಎಂ
ಸೋಮವಾರದ ಬೆಳವಣಿಗೆಯಲ್ಲಿ ಮಾಧುಸ್ವಾಮಿ ರಾಜಿನಾಮೆ ನೀಡುತ್ತಾರೆಂದು ವದಂತಿ ಹಬ್ಬುತ್ತಲೇ ರಾತ್ರಿ ವೇಳೆ ಫೋನ್ ಮಾಡಿದ್ದ ಸಿಎಂ ಯಡಿಯೂರಪ್ಪ, ತಮ್ಮ ಪರಮಾಪ್ತನನ್ನು ಮನವೊಲಿಸಿದ್ದಾರೆ. ಅಲ್ಲದೆ, ನೀರಾವರಿ ಖಾತೆಯನ್ನೇ ಮರಳಿ ನೀಡುವುದಾಗಿ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಪ್ರವಾಸೋದ್ಯಮ ಮತ್ತು ವಕ್ಫ್ ಖಾತೆ ನೀಡಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ ಮಾಧುಸ್ವಾಮಿ, ಸಿಎಂ ಫೋನ್ ಮಾಡಿದಾಗಲು ಸ್ವಾಭಿಮಾನಕ್ಕೆ ಪೆಟ್ಟಾಗಿದ್ದು ಸಚಿವನಾಗಿ ಮುಂದುವರಿಯಲ್ಲ. ಶಾಸಕನಾಗಿಯೇ ಇರುತ್ತೇನೆ ಎಂದು ಹೇಳಿ ಫೋನ್ ಇಟ್ಟಿದ್ದರು. ತಮ್ಮ ಆಪ್ತರ ಬಳಿಯೂ ಇದನ್ನೇ ಹೇಳುತ್ತಿದ್ದರು.
ಸಿಎಂ ಯಡಿಯೂರಪ್ಪ ವಿರುದ್ಧ ವಿಪಕ್ಷಗಳು ಮುಗಿಬೀಳುತ್ತಿದ್ದಾಗ ಗಟ್ಟಿಯಾಗಿ ಅಡ್ಡ ನಿಂತು ಸಮರ್ಥಿಸಿಕೊಳ್ಳುತ್ತಿದ್ದ ಮಾಧುಸ್ವಾಮಿ ಸಚಿವ ಸ್ಥಾನದಿಂದ ದೂರ ಸರಿಯುವುದು ಯಡಿಯೂರಪ್ಪರಿಗೆ ದೊಡ್ಡ ಪೆಟ್ಟು ಬಿದ್ದಂತಾಗಿತ್ತು. ಕೂಡಲೇ ಎಚ್ಚೆತ್ತ ಯಡಿಯೂರಪ್ಪ ಸಿ.ಪಿ.ಯೋಗೀಶ್ವರ್ ಗೆ ಕೊಟ್ಟಿದ್ದ ನೀರಾವರಿ ಖಾತೆಯನ್ನು ಮರಳಿ ಮಾಧುಸ್ವಾಮಿಗೆ ನೀಡಿ ಕೈತೊಳೆದುಕೊಂಡಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm