ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm