ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm