ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.
ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.
ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm