ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm