ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm