ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.
ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm