ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm