ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm