ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm