ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm