ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm