ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.




ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm