ಬ್ರೇಕಿಂಗ್ ನ್ಯೂಸ್
17-02-21 10:21 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17: ಮೀಸಲಾತಿ ಹೋರಾಟದಲ್ಲಿ ರಾಜ್ಯದ ಸಚಿವರು ಭಾಗಿಯಾಗಿದ್ದು ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಸಿಎಂ ಯಡಿಯೂರಪ್ಪ ಅವರಿಗೆ ಪೀಕಲಾಟ ತಂದಿಟ್ಟಿದೆ. ಮೀಸಲಾತಿ ಹೋರಾಟದಲ್ಲಿ ಬಿಜೆಪಿ ಸಚಿವರು, ಶಾಸಕರು ಪಾಲ್ಗೊಂಡಿದ್ದ ಬಗ್ಗೆ ಮತ್ತು ಸದ್ಯದ ಸ್ಥಿತಿಗತಿ ಬಗ್ಗೆ ಬಿಜೆಪಿ ಹೈಕಮಾಂಡ್ ರಾಜ್ಯದಿಂದ ಪ್ರತ್ಯೇಕ ವರದಿ ಕೇಳಿದೆ.
ಕೆಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು ಇದರಲ್ಲಿ ಈಶ್ವರಪ್ಪ ಸೇರಿದಂತೆ ಕೆಲವು ಸಚಿವರು ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ದರು. ಕೇಂದ್ರ ಬಿಜೆಪಿ ನಾಯಕರ ಸೂಚನೆ ಹೊರತಾಗಿಯೂ ಈ ನಡೆ ತೋರಿದ್ದಕ್ಕೆ ಹೈಕಮಾಂಡ್ ನಾಯಕರು ಗರಂ ಆಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಹಲವು ಸಚಿವರು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಾರೆ, ಸಚಿವರಾದ ಬಿ. ಶ್ರೀರಾಮುಲು, ಕೆ.ಎಸ್ ಈಶ್ವರಪ್ಪ ಮತ್ತು ಹೋರಾಟದಲ್ಲಿ ಪಾಲ್ಗೊಂಡಿದ್ದ ಶಾಸಕರ ಬಗ್ಗೆ ಹೈಕಮಾಂಡ್ ಮಾಹಿತಿ ಕೇಳಿದೆ. ಮೀಸಲಾತಿ ಹೋರಾಟದಲ್ಲಿ ಭಾಗವಹಿಸದಂತೆ ತಮ್ಮ ಸಂಪುಟ ಸದಸ್ಯರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದರೂ, ಕೆಲವರು ಭಾಗಿಯಾಗಿದ್ದರು.
ಮೀಸಲಾತಿ ಹೋರಾಟದ ಸ್ಥಾನಮಾನ, ಜಾತಿವಾರು ಹೋರಾಟದ ಬೇಡಿಕೆಗಳ ಬಗ್ಗೆ ಮುಂದಿನ ವಾರದೊಳಗೆ ವಿವರಣೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚಿಸಿದ್ದಾರೆ ಎನ್ನಲಾಗಿದೆ.
ಮೀಸಲಾತಿಗೆ ಸಂಬಂಧಿಸಿದ ಹೋರಾಟದಲ್ಲಿ ಪಕ್ಷದ ಯಾವುದೇ ಮುಖಂಡರು ಕಾಣಿಸದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇತ್ತೀಚೆಗೆ ನಡೆದ ಕೊರ್ ಕಮಿಟಿ ಸಭೆಯಲ್ಲಿ ಸೂಚಿಸಿದ್ದರು ಎನ್ನಲಾಗುತ್ತಿದ್ದು ಇದನ್ನು ಪರಿಗಣಿಸದೆ ಈಗ ರಾಜ್ಯದ ನಾಯಕರು ಹೋರಾಟದಲ್ಲಿ ಕಾಣಿಸಿಕೊಂಡಿದ್ದು ಇರಿಸು ಮುರಿಸಿಗೆ ಕಾರಣವಾಗಿದೆ.
ಬಿಜೆಪಿ ನಾಯಕರೊಬ್ಬರಿಂದ ಆರಂಭಗೊಂಡ ಹೋರಾಟ ಈಗ ಚಳವಳಿ ರೂಪ ಪಡೆದಿದೆ. ಆದರೆ ಸಚಿವರು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದು ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಕೇಂದ್ರ ಸಚಿವರುಗಳಿಗೂ ಇದು ಅಸಮಾಧಾನ ಉಂಟು ಮಾಡಿತ್ತು. ಈ ಸಂಬಂಧ ಸಿಎಂ ಯಡಿಯೂರಪ್ಪ ಮತ್ತು ಹೋರಾಟದಲ್ಲಿ ಭಾಗವಹಿಸಿದ್ದ ಸಚಿವರಿಗೆ ಕೇಂದ್ರ ನಾಯಕರು ಪ್ರಬಲ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Karnataka chief minister BS Yediyurappa and Bjp president Naleen Kumar Kateel are now found themself in an uncomfortable spot after government does not accept demands of increasing reservation opportunities.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm