ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm