ಬ್ರೇಕಿಂಗ್ ನ್ಯೂಸ್
26-02-21 05:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26 : ಪೊಲೀಸ್ ಇಲಾಖೆಯಲ್ಲಿ ಹತ್ತಾರು ವರ್ಷ ದುಡಿದರೂ ಬಡ್ತಿ ಸಿಗದೆ ರೋಸಿ ಹೋದವರ ಮಾತು ಕೇಳಿದ್ದೇವೆ. ಇಂಥ ಮಾತುಗಳ ಮಧ್ಯೆಯೇ ಕರ್ನಾಟಕ ರಾಜ್ಯ ಮೀಸಲು ಪಡೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್, ಕೆಎಸ್ಸಾರ್ಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಆರು ವರ್ಷ ಸೇವೆ ಪೂರೈಸಿದ ಪೊಲೀಸ್ ಕಾನ್ಸ್ಟೇಬಲ್ ಗಳಿಗೆ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಬಡ್ತಿ ನೀಡಿದ್ದಾರೆ.
ಆರು ವರ್ಷ ಸೇವೆ ಪೂರೈಸಿದ ಕರ್ನಾಟಕ ರಾಜ್ಯ ಮೀಸಲು ಪಡೆಯ 126 ಪುರುಷ ಅಭ್ಯರ್ಥಿಗಳಿಗೆ ಮುಖ್ಯ ಪೇದೆ ಹುದ್ದೆಗೆ ಬಡ್ತಿ ನೀಡಲಾಗಿದೆ. ಅಲ್ಲದೆ, 4 ರಿಂದ 5 ವರ್ಷ ಸೇವೆ ಸಲ್ಲಿಸಿದ 72 ಮಹಿಳಾ ಅಭ್ಯರ್ಥಿಗಳಿಗೆ ಕೂಡ ಬಡ್ತಿ ನೀಡಿದ್ದಾರೆ. ಈ ಮೂಲಕ ಹತ್ತು ವರ್ಷ ಸೇವೆ ಸಲ್ಲಿಸಿದರೂ ಬಡ್ತಿ ಸಿಗದೇ ಪರದಾಡುತ್ತಿದ್ದ ಪೊಲೀಸ್ ಸಿಬ್ಬಂದಿಯಲ್ಲಿ ಸಂತಸ ಮೂಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕೆಲಸ ಆಗಿದೆ ಎಂದು ಕೆಎಸ್ ಆರ್ ಪಿ ಪಡೆಯ ಮುಖ್ಯಸ್ಥ ಅಲೋಕ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ಕಂದಾಯ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಐದು ವರ್ಷ ಸೇವೆ ಸಲ್ಲಿಸಿದರೆ ಕಡ್ಡಾಯ ಬಡ್ತಿ ಸಿಗುತ್ತದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಮಾತ್ರ ಅದರ ಪಾಲನೆ ಆಗುವುದಿಲ್ಲ. ಈ ಹಿಂದೆ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿಯಲ್ಲಿ ಬಡ್ತಿ ಸಂಗತಿ ಪ್ರಸ್ತಾಪವಾಗಿತ್ತು. ಬಡ್ತಿ ಅನ್ನೋದನ್ನೇ ಮರೆತಿದ್ದ ರಾಜ್ಯ ಮೀಸಲು ಪಡೆಯ ಸಿಬ್ಬಂದಿಗೆ ಈಗ ಐದು ವರ್ಷಕ್ಕೆ ಪದೋನ್ನತಿ ಸಿಕ್ಕಿದ್ದು ಸಂತಸದ ಜೊತೆ ಅಚ್ಚರಿಯನ್ನೂ ಮೂಡಿಸಿದೆ.
ಆರಂಭದಲ್ಲಿ ಹೊಟ್ಟೆ ಬಿಟ್ಟು ದೇಹ ಬೆಳೆಸಿಕೊಂಡಿದ್ದ ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬ್ಬಂದಿಗೆ ತೂಕ ಇಳಿಸುವ ಟಾಸ್ಕ್ ಕೊಟ್ಟಿದ್ದರು, ಅಲೋಕ್ ಕುಮಾರ್. ಆರಂಭದಲ್ಲಿ ಇದಕ್ಕೆ ಅಪಸ್ವರ ಕೇಳಿ ಬಂದಿತ್ತು. ಬೆಳಗಿನಿಂದ ಸಂಜೆ ವರಗೆ ಕೆಲಸ ಮಾಡಿ ಬೆಳಗ್ಗೆ ಎದ್ದು ಓಡುವರು ಯಾರು ? ಎಂದು ಅಸಮಾಧಾನ ತೋಡಿಕೊಂಡಿದ್ದರು. ಆದರೆ, ಹಂತ ಹಂತವಾಗಿ ಸಿಬ್ಬಂದಿ ತೂಕ ಇಳಿಸಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ವಿವಾದಗಳಿಂದಲೇ ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ನಿರ್ಗಮಿಸಿದ್ದ ಅಲೋಕ್ ಕುಮಾರ್ ಮೀಸಲು ಪಡೆಯ ಸಿಬ್ಬಂದಿಯಲ್ಲಿ ಬದಲಾವಣೆ ತರುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm