ಬ್ರೇಕಿಂಗ್ ನ್ಯೂಸ್
26-02-21 10:13 pm Bangalore correspondent ಕರ್ನಾಟಕ
ಬೆಂಗಳೂರು, ಫೆ 26: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ವಂಚಿಸಿದ್ದ ಸಿದ್ದಲಿಂಗಸ್ವಾಮಿ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ್ಮಹತ್ಯೆಗೆ ಕಾರಣವೇನು ?
ಅಂದ ಹಾಗೆ, ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ವಂಚನೆ ಮಾಡಿದ್ದ.

ಇನ್ನು, ಈತನ ವಂಚನೆ ಬಯಲಾಗುತ್ತಿದ್ದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ನಾಗರಾಜ್ ಎಂಬುವವರ ದೂರಿನ ಮೇರೆಗೆ FIR ದಾಖಲಾಗಿತ್ತು. ಹೀಗಾಗಿ, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದ ಪೊಲೀಸರು ಸಿದ್ದಲಿಂಗಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ಆರೋಪಿ ಸಿದ್ದಲಿಂಗಸ್ವಾಮಿ ವಿದ್ಯಾರಣ್ಯಪುರದಲ್ಲಿರುವ ತನ್ನ ಮನೆಯಲ್ಲಿ ಕೆಲ ವಸ್ತು ಇಟ್ಟಿದ್ದಾಗಿ ಹೇಳಿದ್ದ. ಹಾಗಾಗಿ, ವಿದ್ಯಾರಣ್ಯಪುರದ ನಿವಾಸಕ್ಕೆ ಸ್ಥಳ ಮಹಜರಿಗೆ ಪೊಲೀಸರು ಕರೆ ತಂದಿದ್ದರು.
ತನ್ನ ಪತ್ನಿ ಮತ್ತು ಮಗಳ ಜೊತೆ ವಿದ್ಯಾರಣ್ಯಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ಫ್ಲ್ಯಾಟ್ ಪಡೆದಿದ್ದ ಸಿದ್ದಲಿಂಗಸ್ವಾಮಿ ಪೊಲೀಸರನ್ನು ಅಲ್ಲಿಗೆ ಕರೆತಂದಿದ್ದನು. ಈ ವೇಳೆ, ಮನೆಯ ಕಿಚನ್ ಮೂಲಕ ತೆರಳಿ ಕಟ್ಟಡದಿಂದ ಕೆಳಗೆ ಹಾರಿದ್ದ. ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಫೆ.24ರಂದು ಬಂಧಿಸಿ ಕೋರ್ಟ್ ಮೂಲಕ ಕಸ್ಟಡಿಗೆ ಪಡೆದಿದ್ರು. ಹೆಚ್ಚಿನ ವಿಚಾರಣೆಗೆ ಹನುಮಂತನಗರ ಪೊಲೀಸರು ವಶಕ್ಕೆ ಪಡೆದಿದ್ದರು.
Accused who was in Police Custody committed suicide by jumping from building in Bangalore. He was brought by the cops for Spot Mahazar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm