ಬ್ರೇಕಿಂಗ್ ನ್ಯೂಸ್
26-02-21 10:13 pm Bangalore correspondent ಕರ್ನಾಟಕ
ಬೆಂಗಳೂರು, ಫೆ 26: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ವಂಚಿಸಿದ್ದ ಸಿದ್ದಲಿಂಗಸ್ವಾಮಿ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ್ಮಹತ್ಯೆಗೆ ಕಾರಣವೇನು ?
ಅಂದ ಹಾಗೆ, ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ವಂಚನೆ ಮಾಡಿದ್ದ.

ಇನ್ನು, ಈತನ ವಂಚನೆ ಬಯಲಾಗುತ್ತಿದ್ದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ನಾಗರಾಜ್ ಎಂಬುವವರ ದೂರಿನ ಮೇರೆಗೆ FIR ದಾಖಲಾಗಿತ್ತು. ಹೀಗಾಗಿ, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದ ಪೊಲೀಸರು ಸಿದ್ದಲಿಂಗಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ಆರೋಪಿ ಸಿದ್ದಲಿಂಗಸ್ವಾಮಿ ವಿದ್ಯಾರಣ್ಯಪುರದಲ್ಲಿರುವ ತನ್ನ ಮನೆಯಲ್ಲಿ ಕೆಲ ವಸ್ತು ಇಟ್ಟಿದ್ದಾಗಿ ಹೇಳಿದ್ದ. ಹಾಗಾಗಿ, ವಿದ್ಯಾರಣ್ಯಪುರದ ನಿವಾಸಕ್ಕೆ ಸ್ಥಳ ಮಹಜರಿಗೆ ಪೊಲೀಸರು ಕರೆ ತಂದಿದ್ದರು.
ತನ್ನ ಪತ್ನಿ ಮತ್ತು ಮಗಳ ಜೊತೆ ವಿದ್ಯಾರಣ್ಯಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ಫ್ಲ್ಯಾಟ್ ಪಡೆದಿದ್ದ ಸಿದ್ದಲಿಂಗಸ್ವಾಮಿ ಪೊಲೀಸರನ್ನು ಅಲ್ಲಿಗೆ ಕರೆತಂದಿದ್ದನು. ಈ ವೇಳೆ, ಮನೆಯ ಕಿಚನ್ ಮೂಲಕ ತೆರಳಿ ಕಟ್ಟಡದಿಂದ ಕೆಳಗೆ ಹಾರಿದ್ದ. ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಫೆ.24ರಂದು ಬಂಧಿಸಿ ಕೋರ್ಟ್ ಮೂಲಕ ಕಸ್ಟಡಿಗೆ ಪಡೆದಿದ್ರು. ಹೆಚ್ಚಿನ ವಿಚಾರಣೆಗೆ ಹನುಮಂತನಗರ ಪೊಲೀಸರು ವಶಕ್ಕೆ ಪಡೆದಿದ್ದರು.
Accused who was in Police Custody committed suicide by jumping from building in Bangalore. He was brought by the cops for Spot Mahazar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm