ಬ್ರೇಕಿಂಗ್ ನ್ಯೂಸ್
27-02-21 11:36 am Headline Karnataka News Network ಕರ್ನಾಟಕ
ಬೆಂಗಳೂರು, ಫೆ.27 : ಅತ್ತ ಕಾಂಗ್ರೆಸ್ ನಲ್ಲಿ ನಾಯಕರ ಮಧ್ಯೆ ಶೀತಲ ಸಮರ ಏರ್ಪಟ್ಟಿರುವಾಗಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಚಿವರ ಮೇಲಿನ ಅಸಮಾಧಾನ ಸ್ಫೋಟಗೊಂಡಿದೆ. ಮೊದಲಿಂದಲೂ ವಲಸಿಗ ಮತ್ತು ಮೂಲ ಬಿಜೆಪಿಗರ ನಡುವೆ ವೈರುಧ್ಯ ಇತ್ತು. ಇದೀಗ ವಲಸಿರಾಗಿ ಬಂದು ಪ್ರಮುಖ ಖಾತೆಯನ್ನು ಗಿಟ್ಟಿಸಿಕೊಂಡಿರುವ ಡಾ.ಸುಧಾಕರ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಡಾ.ಕೆ.ಸುಧಾಕರ್ ಆಗಲೀ, ಅವರ ಪಿಎಗಳಾಗಲೀ ಫೋನ್ ಸ್ವೀಕರಿಸುತ್ತಿಲ್ಲ. ಅವರೇನು ದೇವಲೋಕದಿಂದ ಇಳಿದು ಬಂದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ರೇಣುಕಾಚಾರ್ಯ, ತಮ್ಮದೇ ಪಕ್ಷದ ಸಚಿವ ಸುಧಾಕರ್ ನಡೆಯನ್ನು ಖಂಡಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹೊನ್ನಾಳಿ ಕ್ಷೇತ್ರದ ಕೆಲಸದ ಬಗ್ಗೆ ಡಾ.ಕೆ.ಸುಧಾಕರ್ ಬಳಿ ರೇಣುಕಾಚಾರ್ಯ ತಿಳಿಸಿದ್ದರು. ಆದರೆ, ಇದೇ ವಿಚಾರದಲ್ಲಿ ಪದೇ ಪದೆ ಮನವಿ ಮಾಡಿದರೂ ಸುಧಾಕರ್ ಸ್ಪಂದಿಸಿರಲಿಲ್ಲ. ಸಚಿವ ಡಾ.ಕೆ.ಸುಧಾಕರ್ ಶಾಸಕರ ಕೈಗೇ ಸಿಗುವುದಿಲ್ಲ. ಆದ್ರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂದು ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಕೆಲವು ಸಚಿವರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಲೇ ಬೇಕು. ಸಚಿವ ಡಾ.ಕೆ.ಸುಧಾಕರ್ ನನ್ನ ಫೋನ್ ಸ್ವೀಕರಿಸುತ್ತಿಲ್ಲ. ಹಾಗೂ ಸುಧಾಕರ್ ಪಿಎಗಳು ಸಹ ನನ್ನ ಫೋನ್ ಸ್ವೀಕರಿಸುತ್ತಿಲ್ಲ. ಅವರೇನು ದೇವಲೋಕದಿಂದ ಇಳಿದು ಬಂದವರಲ್ಲ ತಾನೇ ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಸುಧಾಕರ್ ತನಗೆ ಎರಡೆರಡು ಖಾತೆ ಕೇಳುವುದಕ್ಕೆ ಆಗುತ್ತೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸುವುದಕ್ಕೆ ಇವರಿಗೆ ಆಗಲ್ವಾ? ಡಾ.ಕೆ.ಸುಧಾಕರ್ ಒಬ್ಬರಿಂದಲೇ ಈ ಸರ್ಕಾರ ಬಂದಿಲ್ಲ. ಇವರಷ್ಟೇ ಅಲ್ಲ , ಐದರಿಂದ ಆರು ಸಚಿವರು ಶಾಸಕರ ಕೈಗೇ ಸಿಗುತ್ತಿಲ್ಲ. ಇವರೇನು ಬಿಟ್ಟಿ ಗೆದ್ದು ಬಂದಿಲ್ಲವೆಂದು ಸಚಿವರ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ.
ನಾನು ಎರಡು ಭಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಪಕ್ಷ ಸಂಘಟನೆಯ ಕೆಲಸ ಮಾಡಿ ಮೂರು ಬಾರಿ ಗೆದ್ದಿದ್ದೇನೆ. ಆದ್ರೆ ಪಕ್ಷಕ್ಕಾಗಿ ಕೆಲವರ ಕೊಡುಗೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಅವಮಾನ ಮಾಡಿದ್ದಾರೆ, ಇದನ್ನು ಖಂಡಿಸುತ್ತೇನೆ ಎಂದು ಆಕ್ರೋಶದಿಂದ ಹೇಳಿದ್ದಾರೆ
M P Renukacharya slams at Minister dr Sudhakar says he is not an angel from heaven.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm