ಬ್ರೇಕಿಂಗ್ ನ್ಯೂಸ್
27-02-21 11:36 am Headline Karnataka News Network ಕರ್ನಾಟಕ
ಬೆಂಗಳೂರು, ಫೆ.27 : ಅತ್ತ ಕಾಂಗ್ರೆಸ್ ನಲ್ಲಿ ನಾಯಕರ ಮಧ್ಯೆ ಶೀತಲ ಸಮರ ಏರ್ಪಟ್ಟಿರುವಾಗಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಚಿವರ ಮೇಲಿನ ಅಸಮಾಧಾನ ಸ್ಫೋಟಗೊಂಡಿದೆ. ಮೊದಲಿಂದಲೂ ವಲಸಿಗ ಮತ್ತು ಮೂಲ ಬಿಜೆಪಿಗರ ನಡುವೆ ವೈರುಧ್ಯ ಇತ್ತು. ಇದೀಗ ವಲಸಿರಾಗಿ ಬಂದು ಪ್ರಮುಖ ಖಾತೆಯನ್ನು ಗಿಟ್ಟಿಸಿಕೊಂಡಿರುವ ಡಾ.ಸುಧಾಕರ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಡಾ.ಕೆ.ಸುಧಾಕರ್ ಆಗಲೀ, ಅವರ ಪಿಎಗಳಾಗಲೀ ಫೋನ್ ಸ್ವೀಕರಿಸುತ್ತಿಲ್ಲ. ಅವರೇನು ದೇವಲೋಕದಿಂದ ಇಳಿದು ಬಂದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ರೇಣುಕಾಚಾರ್ಯ, ತಮ್ಮದೇ ಪಕ್ಷದ ಸಚಿವ ಸುಧಾಕರ್ ನಡೆಯನ್ನು ಖಂಡಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹೊನ್ನಾಳಿ ಕ್ಷೇತ್ರದ ಕೆಲಸದ ಬಗ್ಗೆ ಡಾ.ಕೆ.ಸುಧಾಕರ್ ಬಳಿ ರೇಣುಕಾಚಾರ್ಯ ತಿಳಿಸಿದ್ದರು. ಆದರೆ, ಇದೇ ವಿಚಾರದಲ್ಲಿ ಪದೇ ಪದೆ ಮನವಿ ಮಾಡಿದರೂ ಸುಧಾಕರ್ ಸ್ಪಂದಿಸಿರಲಿಲ್ಲ. ಸಚಿವ ಡಾ.ಕೆ.ಸುಧಾಕರ್ ಶಾಸಕರ ಕೈಗೇ ಸಿಗುವುದಿಲ್ಲ. ಆದ್ರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂದು ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಕೆಲವು ಸಚಿವರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಲೇ ಬೇಕು. ಸಚಿವ ಡಾ.ಕೆ.ಸುಧಾಕರ್ ನನ್ನ ಫೋನ್ ಸ್ವೀಕರಿಸುತ್ತಿಲ್ಲ. ಹಾಗೂ ಸುಧಾಕರ್ ಪಿಎಗಳು ಸಹ ನನ್ನ ಫೋನ್ ಸ್ವೀಕರಿಸುತ್ತಿಲ್ಲ. ಅವರೇನು ದೇವಲೋಕದಿಂದ ಇಳಿದು ಬಂದವರಲ್ಲ ತಾನೇ ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಸುಧಾಕರ್ ತನಗೆ ಎರಡೆರಡು ಖಾತೆ ಕೇಳುವುದಕ್ಕೆ ಆಗುತ್ತೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸುವುದಕ್ಕೆ ಇವರಿಗೆ ಆಗಲ್ವಾ? ಡಾ.ಕೆ.ಸುಧಾಕರ್ ಒಬ್ಬರಿಂದಲೇ ಈ ಸರ್ಕಾರ ಬಂದಿಲ್ಲ. ಇವರಷ್ಟೇ ಅಲ್ಲ , ಐದರಿಂದ ಆರು ಸಚಿವರು ಶಾಸಕರ ಕೈಗೇ ಸಿಗುತ್ತಿಲ್ಲ. ಇವರೇನು ಬಿಟ್ಟಿ ಗೆದ್ದು ಬಂದಿಲ್ಲವೆಂದು ಸಚಿವರ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ.
ನಾನು ಎರಡು ಭಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಪಕ್ಷ ಸಂಘಟನೆಯ ಕೆಲಸ ಮಾಡಿ ಮೂರು ಬಾರಿ ಗೆದ್ದಿದ್ದೇನೆ. ಆದ್ರೆ ಪಕ್ಷಕ್ಕಾಗಿ ಕೆಲವರ ಕೊಡುಗೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಅವಮಾನ ಮಾಡಿದ್ದಾರೆ, ಇದನ್ನು ಖಂಡಿಸುತ್ತೇನೆ ಎಂದು ಆಕ್ರೋಶದಿಂದ ಹೇಳಿದ್ದಾರೆ
M P Renukacharya slams at Minister dr Sudhakar says he is not an angel from heaven.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm