ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.
ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.
ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm