ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm