ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm