ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
24-10-25 01:11 pm
Bangalore Correspondent
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
24-10-25 11:57 am
Mangalore Correspondent
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
24-10-25 10:07 am
Mangalore Correspondent
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm