ಬ್ರೇಕಿಂಗ್ ನ್ಯೂಸ್
04-03-21 12:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 4: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.

ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸುಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.
BJP Minister Ramesh Jarkiholi who has been caught in Caught in sex-for-job scandal is now planned to approach the court to stop his sex video from being played on News and Social Media Platforms.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm