ಬ್ರೇಕಿಂಗ್ ನ್ಯೂಸ್
05-03-21 12:32 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.05: ರಮೇಶ್ ಜಾರಕಿಹೊಳಿ ರಾಸಲೀಲೆ CD ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ದೂರು ನೀಡದ ಕಾರಣ FIR ದಾಖಲಿಸಲಾಗಲ್ಲ. ಕಾನೂನಿನಡಿ ಎಫ್ಐಆರ್ ದಾಖಲಿಸಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ವಕೀಲ ರಮೇಶ್ ಬೆಂಗಳೂರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕಾನೂನಿನ ಪ್ರಕಾರ ಸಂತ್ರಸ್ತೆ, ಸಂತ್ರಸ್ತೆ ಪೋಷಕರು ಅಥವಾ ಸಂಬಂಧಿಕರು ದೂರು ನೀಡಬೇಕು. ಅನಾಮಿಕ ದೂರಿನಿಂದ ಕಾನೂನಿನಡಿ FIR ದಾಖಲಿಸಲಾಗಲ್ಲ. ದೂರು ಕೊಟ್ಟವನನ್ನೇ ಹಿಡಿದು ವಿಚಾರಣೆ ನಡೆಸಬೇಕು ಎಂದು ಹೇಳಿದ್ದಾರೆ.


ರಮೇಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ನೀಡಿದ್ದಾರೆ. ದಾರಿಯಲ್ಲಿ ಹೋಗುವವನು ಕೂಡ ದೂರು ಕೊಡಬಹುದು. ‘ಸಿಡಿ’ ಇದೆ ಎಂದು ಬೇಕಾಬಿಟ್ಟಿಯಾಗಿ ಮಾತಾಡಬಹುದು. ದೂರುದಾರ ದಿನೇಶ್ ಕಲ್ಲಹಳ್ಳಿ ಬಳಿ ಯಾವುದೇ ಸಾಕ್ಷಿ ಇಲ್ಲ. ವಿಡಿಯೋ ಸಾಕ್ಷ್ಯ ಸಾಕಾಗೋದಿಲ್ಲ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ರಮೇಶ್ ಬ್ಯಾಟಿಂಗ್ ಮಾಡಿದ್ದಾರೆ.


ಬೆಳಗಾವಿಯಲ್ಲಿ ಬಂದ್ ವಾತಾವರಣ
ಅಶ್ಲೀಲ ಸಿಡಿ ವಿಚಾರಕ್ಕಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ನಂತರ ಕ್ಷುದ್ರಗೊಂಡಿರುವ ಅವರ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಪ್ರತಿಭಟನೆಗೆ ಹೆದರಿ ಗೋಕಾಕ್ನಲ್ಲಿ ಕಾಲೇಜುಗಳನ್ನು ದಿಢೀರನೆ ಬಂದ್ ಮಾಡಲಾಗಿದೆ. ಇನ್ನೊಂದೆಡೆ ಸರ್ಕಾರಿ ಬಸ್ ಸಂಚಾರ ಸಹ ಗೋಕಾಕ್ನಲ್ಲಿ ಸ್ಥಗಿತಗೊಂಡಿದ್ದು, ಅರ್ಧ ದಾರಿಯಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು ಮತ್ತು ಕೆಲಸದ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೊರಟವರು ಪರದಾಡುವಂತಾಗಿದೆ.

ಪ್ರತಿಭಟನೆಯ ಕಾವು ಏರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಗೋಕಾಕ್- ಧಾರವಾಡ ರಸ್ತೆ ತಡೆದು ಧರಣಿ ನಡೆಸುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ತಕ್ಷಣ ಧಾವಿಸಿದ ಪೊಲೀಸರು ಬೆಂಬಲಿಗನನ್ನು ತಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನು ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ನಲ್ಲಿ ರಮೇಶ್ ಬೆಂಬಲಿಗರ ಪ್ರತಿಭಟನೆ ಜೋರಾಗಿದ್ದು, ಟೈರ್ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟಿಸುತ್ತಿದ್ದಾರೆ.
Two days after lodging a complaint with Bengaluru’s Cubbon Park police station against former water resources minister Ramesh Jarkiholi who reigned over allegations of sexual exploitation, social activist Dinesh Kalahalli failed to appear before the police on Thursday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm