ಬ್ರೇಕಿಂಗ್ ನ್ಯೂಸ್
05-03-21 12:32 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.05: ರಮೇಶ್ ಜಾರಕಿಹೊಳಿ ರಾಸಲೀಲೆ CD ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ದೂರು ನೀಡದ ಕಾರಣ FIR ದಾಖಲಿಸಲಾಗಲ್ಲ. ಕಾನೂನಿನಡಿ ಎಫ್ಐಆರ್ ದಾಖಲಿಸಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ವಕೀಲ ರಮೇಶ್ ಬೆಂಗಳೂರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕಾನೂನಿನ ಪ್ರಕಾರ ಸಂತ್ರಸ್ತೆ, ಸಂತ್ರಸ್ತೆ ಪೋಷಕರು ಅಥವಾ ಸಂಬಂಧಿಕರು ದೂರು ನೀಡಬೇಕು. ಅನಾಮಿಕ ದೂರಿನಿಂದ ಕಾನೂನಿನಡಿ FIR ದಾಖಲಿಸಲಾಗಲ್ಲ. ದೂರು ಕೊಟ್ಟವನನ್ನೇ ಹಿಡಿದು ವಿಚಾರಣೆ ನಡೆಸಬೇಕು ಎಂದು ಹೇಳಿದ್ದಾರೆ.


ರಮೇಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ನೀಡಿದ್ದಾರೆ. ದಾರಿಯಲ್ಲಿ ಹೋಗುವವನು ಕೂಡ ದೂರು ಕೊಡಬಹುದು. ‘ಸಿಡಿ’ ಇದೆ ಎಂದು ಬೇಕಾಬಿಟ್ಟಿಯಾಗಿ ಮಾತಾಡಬಹುದು. ದೂರುದಾರ ದಿನೇಶ್ ಕಲ್ಲಹಳ್ಳಿ ಬಳಿ ಯಾವುದೇ ಸಾಕ್ಷಿ ಇಲ್ಲ. ವಿಡಿಯೋ ಸಾಕ್ಷ್ಯ ಸಾಕಾಗೋದಿಲ್ಲ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ರಮೇಶ್ ಬ್ಯಾಟಿಂಗ್ ಮಾಡಿದ್ದಾರೆ.


ಬೆಳಗಾವಿಯಲ್ಲಿ ಬಂದ್ ವಾತಾವರಣ
ಅಶ್ಲೀಲ ಸಿಡಿ ವಿಚಾರಕ್ಕಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ನಂತರ ಕ್ಷುದ್ರಗೊಂಡಿರುವ ಅವರ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಪ್ರತಿಭಟನೆಗೆ ಹೆದರಿ ಗೋಕಾಕ್ನಲ್ಲಿ ಕಾಲೇಜುಗಳನ್ನು ದಿಢೀರನೆ ಬಂದ್ ಮಾಡಲಾಗಿದೆ. ಇನ್ನೊಂದೆಡೆ ಸರ್ಕಾರಿ ಬಸ್ ಸಂಚಾರ ಸಹ ಗೋಕಾಕ್ನಲ್ಲಿ ಸ್ಥಗಿತಗೊಂಡಿದ್ದು, ಅರ್ಧ ದಾರಿಯಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು ಮತ್ತು ಕೆಲಸದ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೊರಟವರು ಪರದಾಡುವಂತಾಗಿದೆ.

ಪ್ರತಿಭಟನೆಯ ಕಾವು ಏರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಗೋಕಾಕ್- ಧಾರವಾಡ ರಸ್ತೆ ತಡೆದು ಧರಣಿ ನಡೆಸುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ತಕ್ಷಣ ಧಾವಿಸಿದ ಪೊಲೀಸರು ಬೆಂಬಲಿಗನನ್ನು ತಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನು ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ನಲ್ಲಿ ರಮೇಶ್ ಬೆಂಬಲಿಗರ ಪ್ರತಿಭಟನೆ ಜೋರಾಗಿದ್ದು, ಟೈರ್ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟಿಸುತ್ತಿದ್ದಾರೆ.
Two days after lodging a complaint with Bengaluru’s Cubbon Park police station against former water resources minister Ramesh Jarkiholi who reigned over allegations of sexual exploitation, social activist Dinesh Kalahalli failed to appear before the police on Thursday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm