ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 09:06 pm
Mangalore Correspondent
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm