ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm