ಬ್ರೇಕಿಂಗ್ ನ್ಯೂಸ್
07-03-21 03:02 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.7: ಡಿಜಿಟಲ್ ಯುಗ ಹಾಗೂ ಡಿಮಾನಿಟೀಷನ್ ಕಾಲದಲ್ಲಿ ಹೊಸಾ ಹೊಸಾ ನೋಟುಗಳು ಬರ್ತಾ ಇದ್ದು, ಹಳೇಯ ನೋಟುಗಳು ಕಣ್ಮರೆಯಾಗುತ್ತಿದೆ. ಇಂದಿನ ಕಾಲದ ಮಕ್ಕಳಿಗೆ ಹಳೆಯ ನೋಟು, ನಾಣ್ಯಗಳ ಪರಿಚಯವೇ ಇಲ್ಲದಂತಾಗಿದೆ. ಅಂತಹ ಮಕ್ಕಳಿಗೆ ರಾಜರ ಕಾಲದ ನ್ಯಾಣ್ಯಗಳಿಂದ ಹಿಡಿದು 150 ಕ್ಕೂ ಹೆಚ್ಚು ದೇಶಗಳ ನೋಟುಗಳನ್ನ ಪ್ರದರ್ಶನದ ಮೂಲಕ ಪರಿಚಯಿಸಲಾಯಿತು.

ನಾಣ್ಯ ಹಾಗೂ ನೋಟುಗಳ ಪ್ರದರ್ಶನ
ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಸಮುದಾಯ ಭವನದಲ್ಲಿ, ರೋಟರಿ ಕ್ಲಬ್ ವತಿಯಿಂದ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಈರಪ್ಪ ಜಿ ಪರಮಶೆಟ್ಟಿ ಎನ್ನುವರು ಸಂಗ್ರಹಿಸಿದ್ದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಇದರಲ್ಲಿ ನೂರೈವತ್ತಕ್ಕೂ ಹೆಚ್ಚು ದೇಶಗಳ ನೋಟುಗಳನ್ನು ಹಾಗೂ ಚಂದ್ರಗುಪ್ತ ಮೌರ್ಯ, ಹೊಯ್ಸಳ, ಕದಂಬ, ಪೇಶ್ವೆಗಳ ಕಾಲದ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.

ಚಿಕ್ಕ ವಯಸ್ಸಿನಿಂದ ಈ ಹವ್ಯಾಸ
ಅಲ್ಲದೆ 92 ಮಾದರಿಯ ಒಂದು ರೂಪಾಯಿ ನೋಟುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಫ್ಯಾನ್ಸಿ ನಂಬರ್ಗಳ ನೋಟುಗಳು ಸೇರಿದಂತೆ ಮ್ಯಾಜಿಕ್ ನಂಬರ್ಗಳನ್ನು ಕೂಡ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದ್ದರು. ಇನ್ನು ಈ ನೋಟು ಹಾಗೂ ನಾಣ್ಯಗಳ ಪ್ರದರ್ಶನ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಚಿಕ್ಕ ವಯಸ್ಸಿನಿಂದ ಈ ಹವ್ಯಾಸ ಬಂದಿದ್ದು ಎನ್ನುತ್ತಾರೆ ಸಂಗ್ರಹಕಾರರು.

ವಿಧ್ಯಾರ್ಥಿಗಳ ಜೊತೆ ಸಾರ್ವಜನಿಕರು ಆಗಮಿಸಿ ಜ್ಞಾನವನ್ನು ಹೆಚ್ವಿಸಿಕೊಳ್ಳುತ್ತಿದ್ದಾರೆ
ಇನ್ನು ಈ ಸೂರಿನಡಿ ಮಕ್ಕಳಿಗೆ ವಿಶೇಷವಾಗಿ ನೋಟು ನಾಣ್ಯಗಳ ಬಗ್ಗೆ ಅಧ್ಯಾಯನ ನಡೆಸಲು ಈರಣ್ಣರವರಿಂದ ಮಾರ್ಗದರ್ಶನ ನೀಡುತ್ತಿದ್ದು, ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಜ್ಞಾನವನ್ನು ಹೆಚ್ವಿಸಿಕೊಳ್ಳಲು ಸಹಕಾರಿಯಾಗಿತ್ತು. ಇನ್ನು ರಿಸರ್ವ ಬ್ಯಾಂಕ್ನ ಗವರ್ನರ್ಗಳ ಅವಧಿಯಲ್ಲಿ ಯಾವ ಯಾವ ನೋಟುಗಳ ಮುದ್ರಣವಾಯ್ತು ಎನ್ನುವುದರ ಬಗ್ಗೆ ಕೂಡ ಮಾಹಿತಿ ನೀಡಿ ನೋಟುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇದರಿಂದ ವಿಧ್ಯಾರ್ಥಿಗಳು ಪ್ರದರ್ಶನ ಮೇಳದಲ್ಲಿ ಭಾಗವಹಿಸಿ ನೋಟುಗಳ ಬಗ್ಗೆ ಮಾಹಿತಿ ತಿಳಿದು ಜ್ಞಾನವನ್ನು ಹೆಚ್ವಿಸಿಕೊಂಡರು.
Old currency expo held in Davanagere, Karnataka. Hundreds flocked into the expo to see various currencies.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm